ಭಟ್ಕಳ: ಪಕ್ಕದ ಬೈಂದೂರು ತಾಲೂಕು ಉಪ್ಪುಂದದಲ್ಲಿ ಮೊಬೈಲ್ ಅಂಗಡಿಗೆ ಕನ್ನ ಹಾಕಿದ ಮುರುಡೇಶ್ವರ ಮೂಲದ ನಾಲ್ವರು ಆರೋಪಿಗಳನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ಮಹ್ಮದ್ ರಫಿ, ಮಹ್ಮದ್ ರಾಹಿಕ್, ಮಹ್ಮದ್ ಇಟ್ಬಾಲ್, ಮಹ್ಮದ್ ಆಸೀಫ್ ಎಂದು ಗುರುತಿಸಲಾಗಿದೆ.
ಈ ಸಂಬಂಧ ಉಪ್ಪುಂದದ ಪ್ರಶಾಂತ ಎನ್ನುವವರು ಪೊಲೀಸರಿಗೆ ದೂರು ನೀಡಿದ್ದರು. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.