ಭಟ್ಕಳ : ತಾಲೂಕಿನ ಬೆಳಕೆ ಕಡಲತೀರದಲ್ಲಿ ಈಜಲು ಹೋದ ಬಾಲಕನೋರ್ವ ನೀರುಪಾಲಾದ ಘಟನೆ ನಡೆದಿದೆ.
ಶಶಾಂಕ ಮಾದೇವ ಮೊಗೇರ (16) ನೀರುಪಾಲಾದ ಬಾಲಕ ಎಂದು ಹೇಳಲಾಗಿದೆ. ಗುರುವಾರ ಮಧ್ಯಾಹ್ನ ಬಾಲಕ ಊರ ಇಬ್ಬರ ಮಕ್ಕಳ ಜೊತೆ ಕಡಲತೀರದಲ್ಲಿ ಈಜಲು ಹೋಗಿದ್ದ. ಈ ವೇಳೆ ನೀರಿನ ಸುಳಿಗೆ ಕೊಚ್ಚಿ ಹೋಗಿದ್ದಾನೆ.
ಸ್ಥಳೀಯರು ಸ್ಥಳಕ್ಕೆ ಧಾವಿಸಿ ಬಾಲಕನಿಗಾಗಿ ಶೋಧ ನಡೆಸಿದರೂ ಪ್ರಯೋಜನವಾಗಿಲ್ಲ. ಭಟ್ಕಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.