ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಭಟ್ಕಳ: ಮೀನುಗಾರಿಕೆಗೆ ತೆರಳಿದ ದೋಣಿ ಮುಳುಗಡೆ:ಮೀನುಗಾರ ನಾಪತ್ತೆ

ಭಟ್ಕಳ: ಮೀನುಗಾರಿಕೆಗೆ ತೆರಳಿದ ದೋಣಿ ಮುಳುಗಡೆ:ಮೀನುಗಾರ ನಾಪತ್ತೆ

Tue, 30 Aug 2022 12:59:04  Office Staff   SO NEWS

ಭಟ್ಕಳ: ಮೀನುಗಾರಿಕೆ ತೆರಳಿದ ದೋಣಿಯೊಂದು ಅಲೆಯ ಹೊಡೆತಕ್ಕೆ ಮುಳುಗಡೆಯಾಗಿರುವ ಘಟನೆ ಜಾಲಿಯಲ್ಲಿ ನಡೆದಿದೆ. 

ಘಟನೆಯಲ್ಲಿ  ಓರ್ವ ಮೀನುಗಾರ ನಾಪತ್ತೆಯಾಗಿದ್ದು ಇಬ್ಬರು ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ದೋಣಿ ಮುಳುಗಡೆಯಾಗಿ ನಾಪತ್ತೆಯಾದ ಮೀನುಗಾರರನ್ನು ನಾಗರಾಜ ರಾಮಕೃಷ್ಣ ಮೊಗೇರ  ಜಾಲಿ ನಿವಾಸಿ ಎಂದು ತಿಳಿದು ಬಂದಿದೆ. ರಕ್ಷಣೆಯಾದವರನ್ನು ವಿಕ್ಟರ್ ರಾಜ ಹಾಗೂ ಪುರುಷೋತ್ತಮ ಮೊಗೇರ ಎಂದು ತಿಳಿದು ಬಂದಿದೆ. ಈ ಮೂವರು ಮೀನುಗಾರ ಮೀನುಗಾರಿಕೆಗೆ ತೆರಳಿದ ವೇಳೆ ಅಲೆಯ ಹೊಡೆತಕ್ಕೆ ದೋಣಿ ಮುಳುಗಡೆಯಾಗಿದ್ದು. ದೋಣಿಯಲ್ಲಿದ್ದ ಮೂವರಲ್ಲಿ ಓರ್ವ ನಾಪತ್ತೆಯಾದ್ದು. 
ಇನ್ನಿಬ್ಬರು ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ.

ಸದ್ಯ ರಕ್ಷಣೆ ಮಾಡಿರುವ ಮೀನುಗಾರಿಗೆ ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾಪತ್ತೆಯಾದ ಮೀನುಗಾರನನ್ನು ಹುಡುಕುಕಾಟ ನಡೆಯುತ್ತಿದೆ


Share: