ಶಿರಸಿ: ಅಪರಿಚಿತ ವ್ಯಕ್ತಿಯೊಬ್ಬ ನೀರು ಕೇಳಲು ನೆಪದಲ್ಲಿ, ಮಾಜಿ ಸಂಸದರ ಪತ್ನಿಯ ಬಂಗಾರದ ಸರವನ್ನು ಅಪಹರಿಸಿದ ಘಟನೆ ನಗರದ ಯಲ್ಲಾಪುರ ನಾಕಾದಲ್ಲಿ ಬುಧವಾರ ನಡೆದಿದೆ.
ಮಾಜಿ ಸಂಸದ ದೇವರಾಯ ನಾಯ್ಕ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಮಾಜಿ ಸಂಸದರ ಪತ್ನಿ ಗೀತಾ ನಾಯ್ಕ ಒಬ್ಬರೇ ಇದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ನೀರು ಕೇಳುವ ನೆಪ ಮಾಡಿಕೊಂಡು ಬಂದಿದ್ದ ಈ ವೇಳೆ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಸರ ಕಿತ್ತು ಪರಾರಿಯಾಗಿದ್ದಾನೆ.
ಅಂದಾಜು 3 ಲಕ್ಷ ರೂ. ಮೌಲ್ಯದ 60 ಗ್ರಾಂ ತೂಕದ ಸರವಾಗಿದೆ. ಈ ವಿಷಯವನ್ನ ಅವರ ಮಗನಿಗೆ ತಿಳಿಸಿದಾಗ ವೈದ್ಯರಾಗಿರುವ ಅವರ ಮಗ ನಾಗರಾಜ ನಾಯ್ಕ ಸ್ಥಳಕ್ಕೆ ಆಗಮಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಶಿರಸಿ ಮಾರುಕಟ್ಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ.
Sirsi: Robber flees after snatching Gold Necklace by posing as a water seeker