ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಮಂಗಳೂರು: ನದಿ ಮಾಲಿನ್ಯ - ತಕ್ಷಣ ನಿಯಂತ್ರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

ಮಂಗಳೂರು: ನದಿ ಮಾಲಿನ್ಯ - ತಕ್ಷಣ ನಿಯಂತ್ರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

Wed, 04 Jun 2025 17:59:28  IG Bhatkali   IG Bhatkali
ಮಂಗಳೂರು: ನದಿ ಮಾಲಿನ್ಯ - ತಕ್ಷಣ ನಿಯಂತ್ರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ  ಸೂಚನೆ

ಮಂಗಳೂರು: ಸುರತ್ಕಲ್ ಖಂಡಿಗೆ ನಂದಿನಿ ನದಿ ತ್ಯಾಜ್ಯದಿಂದ ಮಾಲಿನ್ಯವಾಗುತ್ತಿರುವ ಬಗ್ಗೆ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ  ಆರೋಗ್ಯ ಮತ್ತು  ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್  ಅವರು  ಬುಧವಾರ ಸ್ಥಳಕ್ಕೆ ಭೇಟಿ ನೀಡಿದರು.

ನಂದಿನಿ ನದಿ ಸೇತುವೆಯಲ್ಲಿ ನಿಂತು  ಪರಿಶೀಲನೆ ನಡೆಸಿದ ಅವರು ಸ್ಥಳೀಯರ ಅಹವಾಲು ಆಲಿಸಿದರು. ಕಳೆದ ಹಲವು ವರ್ಷಗಳಿಂದ ನದಿಗೆ ಸ್ಥಳೀಯ ವೈದ್ಯಕೀಯ ಕಾಲೇಜಿನಿಂದ ತ್ಯಾಜ್ಯ ಹರಿದು ಬರುತ್ತಿದೆ. ಸುರತ್ಕಲ್ ವೆಟ್ ವೆಲ್ ನಿಂದಲೂ  ತ್ಯಾಜ್ಯವನ್ನು ನೇರವಾಗಿ ಬಿಡಲಾಗುತ್ತಿದೆ  ಎಂದು  ಸಾರ್ವಜನಿಕರು ಸಚಿವರಿಗೆ ಅಹವಾಲು ಸಲ್ಲಿಸಿದರು.

ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ  ನದಿ ಮಾಲಿನ್ಯದಿಂದ ಸ್ಥಳೀಯರಿಗೆ  ತೀವ್ರ ಸಮಸ್ಯೆ ಆಗಿದೆ. ಇದಕ್ಕೆ ಸಾರ್ವಜನಿಕರು ಹಲವು ಬಾರಿ ಸಂಬಂಧಿಸಿದವರ ಗಮನಕ್ಕೆ ತಂದಿದ್ದರೂ ಸಮಸ್ಯೆ ಪರಿಹಾರವಾಗಿಲ್ಲ  ಎಂದು ಸಚಿವರಿಗೆ ತಿಳಿಸಿದರು.

ಸಚಿವರು ಈ ಸಂದರ್ಭದಲ್ಲಿ ಮಹಾನಗರಪಾಲಿಕೆ  ಆಯುಕ್ತರು ಹಾಗೂ  ಮಾಲಿನ್ಯ ಮಂಡಳಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ನದಿಗೆ ಹರಿದು ಬರುವ ತ್ಯಾಜ್ಯವನ್ನು ತಕ್ಷಣದಿಂದಲೇ ನಿಲ್ಲಿಸಬೇಕು. ಹಾಗೂ ಇದಕ್ಕೆ ಕಾರಣವಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.

ಮಂಗಳೂರು ಮಹಾನಗರಪಾಲಿಕೆಯು ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ  ತಂತ್ರಜ್ಞಾನವನ್ನು ಬಳಸಿಕೊಂಡು ತ್ಯಾಜ್ಯ ಶುದ್ಧೀಕರಣ ಮಾಡಬೇಕು. ಶೀಘ್ರವೇ ಈ ಬಗ್ಗೆ ಸಭೆ ನಡೆಸಲಾಗುವುದು ಎಂದು ಸಚಿವರು ಸೂಚಿಸಿದರು.

ಈ ಸಂದರ್ಭದಲ್ಲಿ  ಸ್ಥಳೀಯ ನಾಗರಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳು ಸಚಿವರಿಗೆ ಮನವಿ ಸಲ್ಲಿಸಿ ನದಿ ಮಾಲಿನ್ಯ ತಡೆಗಟ್ಟಲು ತ್ವರಿತ ಕ್ರಮ ಕೈಗೊಳ್ಳಲು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಅಭಯ ಚಂದ್ರ ಜೈನ್,    ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋμï, ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್,  ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ್ ಮತ್ತಿತರರು ಇದ್ದರು.


Share: