ಯಲ್ಲಾಪುರ : ಗ್ರ್ಯಾನೆಟ್ ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ನೂರು ಮೀಟರ್ ಆಳದ ಪ್ರಪಾತಕ್ಕೆ ಬಿದ್ದ ಘಟನೆ ಶನಿವಾರ ನಡೆದಿದೆ.
ಪರಿಣಾಮವಾಗಿ ಚಾಲಕ ಹಾಗೂ ಕ್ಲಿನರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗುಂಟೂರು ಮೂಲದ ಸೈದಾ ಎಸ್ಕೆ ಪಚಾ ಸಾಹೇಬ್, ಶೇಖ ಬುಡಾ ನರಸರಾವ್ ಪೇಟೆ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಯಲ್ಲಾಪುರ ಕಡೆಯಿಂದ ಅಂಕೋಲಾದ ಕಡೆಗೆ ಗ್ರಾನೆಟ್ ತುಂಬಿಕೊಂಡು ಲಾರಿ ತೆರಳುತಿತ್ತು. ಅರೆಬೈಲ್ ರಾ. ಹೆದ್ದಾರಿ 63 ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ.
ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ.