ಹಾಸನ, ಡಿಸೆಂಬರ್ 11: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಮಳೆಯಲಿ ಜೊತೆಯಲಿ ಚಲನಚಿತ್ರ ಶುಕ್ರವಾರ ತೆರೆಕಂಡಿದ್ದು, ನಗರದ ಎಸ್.ಬಿ.ಜಿ. ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆ ಸಮಾರಂಭ ನಡೆಯಿತು.
ಜಿಲ್ಲಾ ಗೋಲ್ಡನ್ ಸ್ಟಾರ್ ಅಭಿಮಾನಿಗಳ ಸಂಘ ಎಸ್.ಬಿ.ಜಿ. ಚಿತ್ರಮಂದಿರದ ಬಳಿ ಆಯೋಜಿಸಿದ್ದ ಮಳೆಯಲಿ ಜೊತೆಯಲಿ ಚಿತ್ರ ಬಿಡುಗಡೆ ಸಮಾರಂಭವನ್ನು ಸಮಾಜ ಸೇವಕ ಹಾಗೂ ಖ್ಯಾತ ವೈದ್ಯ ಡಾ.ಗುರುರಾಜ್ ಹೆಬ್ಬಾರ್ ಉದ್ಘಾಟಿಸಿದರು.
ನಂತರ ಮಾತನಾಡಿದ ಗುರುರಾಜ್ ಹೆಬ್ಬಾರ್, ಗಣೇಶ್ ಅಭಿನಯದ ಮಳೆಯಲಿ ಜೊತೆಯಲಿ ಚಿತ್ರ ಶತದಿನೋತ್ಸವ ಆಚರಿಸಲಿ ಎಂದು ಶುಭ ಹಾರೈಸಿದರು. ಚಿತ್ರ ಬಿಡುಗಡೆ ಅಂಗವಾಗಿ ಗಣೇಶ್ ಅಭಿಮಾನಿಗಳು ರಕ್ತದಾನ ಶಿಬಿರದಂತ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಸಂಗತಿ ಎಂದರು.
ನಗರಸಭೆ ಹಂಗಾಮಿ ಅಧ್ಯಕ್ಷ ಸಿ.ಆರ್.ಶಂಕರ್ ಮಾತನಾಡಿ, ಮಳೆಯಲಿ ಜೊತೆಯಲಿ ಚಿತ್ರ ಶತದಿನೋತ್ಸವ ಆಚರಿಸಲಿ ಎಂದು ಹಾರೈಸಿದರು.
ನಗರಸಭೆ ಸದಸ್ಯ ಬಂಗಾರಿ ಮಂಜು, ಬ್ಯಾಂಕ್ ಮಂಜಣ್ಣ, ಗೋಲ್ಡನ್ ಸ್ಟಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ನಟೇಶ್, ರಂಗನಾಥ್, ಸೋಮಣ್ಣ ಇತರರು ಉಪಸ್ಥಿತರಿದ್ದರು.