ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ರಾಜ್ಯ ಸುದ್ದಿ / ಚಿಕ್ಕಬಳ್ಳಾಪುರ:ಡಿ.7 ರಂದು ರಾಜ್ಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸಭೆ

ಚಿಕ್ಕಬಳ್ಳಾಪುರ:ಡಿ.7 ರಂದು ರಾಜ್ಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸಭೆ

Sat, 05 Dec 2009 15:56:00  Office Staff   S.O. News Service
ಚಿಕ್ಕಬಳ್ಳಾಪುರ ಡಿ.೫ : ರಾಜ್ಯ ಸರಕಾರದ ಪ್ಯಾಕೇಜ್ ನೀತಿಯಂದಾಗಿ ಜಿಲ್ಲಾ ಪಂಚಾಯಿತಿಗಳ ಅಧಿಕಾರ ಮೊಟಕುಗೊಳ್ಳುತ್ತಿದ್ದು ಇದನ್ನು ಚರ್ಚಿಸುವ ಸಲುವಾಗಿ ಕರ್ನಾಟಕ ಜಿಲ್ಲಾ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷರುಗಳ ಒಕ್ಕೂಟವನ್ನು ರಚಿಸಿಕೊಂಡಿದ್ದು, ಇದು ಡಿ.೭ ರಂದು ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ಸಭೆ ಸೇರಲಿದೆ ಎಂದು ಕೋಲಾರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ್ ತಿಳಿಸಿದರು.
 
ಅವರು ಇಂದು ನಗರದ ಪ್ರವಾಸಿ ಮಂದಿರದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಅಧ್ಯಕ್ಷರೊಂದಿಗೆ ಏರ್ಪಡಿಸಿದ್ದ ಜಂಟಿ ಪತ್ರಿಕಾ ಘೋಷ್ಠಿಯನ್ನುದ್ದೇಶಿ ಮಾತನಾಡುತ್ತಾ, ಸರಕಾರದ ಪ್ಯಾಕೇಜ್ ನೀತಿಗಳಿಂದಾಗಿ ಜಿಲ್ಲಾ ಪಂಚಾಯತ್ ಸದಸ್ಯರ ಅಧಿಕಾರ ಕುಂಠಿತವಾಗುತ್ತಿರುವುದೇ ಅಲ್ಲದೇ ಯೋಜನೆಗಳು ಉತ್ತಮ ರೀತಿಯಲ್ಲಿ ಅನುಷ್ಟಾನಗೊಳ್ಳುತ್ತಿಲ್ಲ ಎಂದರು.
 
ರಾಜ್ಯ ಸರಕಾರದ ಇತ್ತೀಚಿನ ನೀತಿಯಿಂದಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮಿತಿಯು ಜಾರಿಗೆ ಬಂದಿದ್ದು, ಇದರಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿಗಳು ಕಾರ್ಯದರ್ಶಿಗಳಾಗಿ ಆಯಾ ಇಲಾಖಾಧಿಕಾರಿಗಳು ಸದಸ್ಯರಾಗಿ ಯೋಜನೆಗಳನ್ನು ರೂಪಿಸುತ್ತಿದ್ದು, ಇದು ಉತ್ತಮ ಕಾರ್ಯ ರೂಪಕ್ಕೆ ಬರುವಲ್ಲಿ ಇಫಲವಾಗುತ್ತಿದೆ. ಅಲ್ಲದೆ ಜಿಲ್ಲಾ ಪಂಚಾಯತ್ ಸದಸ್ಯರನ್ನು ಯಾವುದೇ ಯೋಜನೆಯ ಬಗ್ಗೆ ಮಾಹಿತಿ ಪಡೆಯಲು ಬಳಸಿಕೊಳ್ಳುತ್ತಿಲ್ಲ. ಪ್ಯಾಕೇಜ್ ನೀತಿಯಿಂದಾಗಿ ವಿವಿಧ ಭೌಗೋಳಿಕ ಹಿನ್ನಲೆ ಹೊಂದಿರುವ ಜಿಲ್ಲೆಗಳಲ್ಲಿ ಕಾಮಗರಿಗಳು ಅನುಷ್ಟಾನಗೊಳ್ಳುವುದಲ್ಲಿ ಹಿನ್ನಡೆಯಾಗುತ್ತಿರುವುದಲ್ಲದೆ, ಇಚ್ಛಾಶಕ್ತಿಯ ಕೊರತೆಯಿಂದಾಗಿ ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರಕಾರದ ಸಾವಿರ ಕೋಟಿಗಳಷ್ಟು ಹಣ ಹಿಂತಿರುಗಿ ಹೋಗುವಂತಾಗಿದೆ. ಇದರಿಂದಾಗಿ ಕೇಂದ್ರ ಸರಕಾರದಲ್ಲಿ ಕರ್ನಾಟಕದಲ್ಲಿ ಏನೂ ಕೊರತೆಯಿಲ್ಲವೆಂಬ ಮಾಹಿತಿ ತಲುಪುವಂತಾಗಿದೆ. ಈ ನಿಟ್ಟಿನಲ್ಲಿ ಡಿ.೭ ರ ಸೋಮವಾರ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್‌ಗಳ ಅಧ್ಯಕ್ಷರುಗಳು ಸಭೆ ಸೇರಿ ದಿವಂಗತ ರಾಜೀವ್ ಗಾಂಧಿ ಹಾಗೂ ನಜೀರ್ ಸಾಬ್‌ರವರುಗಳ ಕನಸಿನ ಕೂಸಾದ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಯತಾವ್ತತಾಗಿ ಅನುಷ್ಟಾನಗೊಳಿಸಬೇಕಾಗಿ ಒತ್ತಾಯಿಸುವುದೇ ಅಲ್ಲದೇ ಈ ಸಂಬಂಧ ಕೇಂದ್ರದ ಪಂಚಾಯತ್ ರಾಜ್ ಸಚಿವರನ್ನು ಭೇಟಿ ಮಾಡಿ ಸಮಸ್ಯೆಗಳನ್ನು ವಿವರಿಸುವ ತೀರ್ಮಾನ ಕೈಗೊಳ್ಳುವುದಾಗಿ ಶ್ರೀನಿವಾಸ್ ತಿಳಿಸಿದರು.
 
ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ವಿನುತಾ ಶ್ರೀನಿವಾಸ್ ಮಾತನಾಡಿ, ಈಗಾಗಲೇ ರಾಜ್ಯ ಗ್ರಾಮೀಭಿವೃದ್ದಿ ಸಚಿವ ಜಗದೀಶ್ ಶೆಟ್ಟರ್‌ರವರೊಂದಿಗೆ ಸಮಸ್ಯೆಯ ಬಗ್ಗೆ ಮಾತನಾಡಿದ್ದು, ಅವರು ಮುಂದಿನ ಅಧಿವೇಶನದಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿರುವುದಾಗಿ ತಿಳಿಸಿದರು.
 
ಪತ್ರಿಕಾ ಘೋಷ್ಠಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಚೆಂಡೂರು ವೆಂಕಟೇಶ್, ಜಿ.ಪಂ ಸದಸ್ಯ ಡಿ.ಓಬಳಪ್ಪ ಉಪಸ್ಥಿತರಿದ್ದರು.        


Share: