ಮಂಗಳೂರು, ಅ.15: ಕಾಮಗಾರಿಯ ಹಣ ಮಂಜೂರು ಮಾಡಲು ಗುತ್ತಿಗೆದಾರರಿಂದ ಲಂಚ ಕೇಳಿದ ಆರೋಪಿಗಳಾದ ಮೂವರು ಎಂಜಿನಿಯರ್ಗಳನ್ನು ಅಮಾನತು ಗೊಳಿಸಲಾಗಿದೆ.
ಗ್ರಾಮೀಣಾಭಿವೃದ್ಧಿ ಇಲಾಖೆಯ ಮಂಗಳೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲೋಕೇಶ್ ಕುಮಾರ್, ಸಹಾಯಕ ಎಂಜಿನಿಯರ್ ಸಂತೋಷ್ ಕುಮಾರ್, ಕಾರ್ಯನಿರ್ವಾಹಕ ಎಂಜಿನಿಯರ್ ನರಸಿಂಹರಾಜು ಎಂಬವರು ಅಮಾನತುಗೊಂಡವರು. ಈ ಮೂವರು ಎಂಜಿನಿಯರ್ಗಳು ಗುತ್ತಿಗೆದಾರರಿಂದ ಕೋಟ್ಯಾಂತರ ರೂ. ಲಂಚ ಕೇಳಿದ್ದರು ಎಂದು ಆರೋಪಿಸಲಾಗಿದೆ.
ಕೆಲವು ದಿನಗಳ ಹಿಂದೆ ಲೋಕಾಯುಕ್ತ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಈ ಮೂವರು ಎಂಜಿನಿಯರ್ಗಳು ಸಿಕ್ಕಿಬಿದ್ದಿದ್ದರು.
ಮಂಗಳೂರು ನ್ಯಾಯಾಲಯವು ಆರೋಪಿಗಳಿಗೆ ಜಾಮೀನು ನೀಡಲು ನಿರಾಕರಿಸಿತ್ತು. ಬಳಿಕ ಆರೋಪಿಗಳು ಹೈಕೋರ್ಟ್ ಮೆಟ್ಟಲೇರಿ ಜಾಮೀನು ಪಡೆದಿದ್ದರು. ಇದೀಗ ಸರಕಾರ ಆರೋಪಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಗ್ರಾಮೀಣಾಭಿವೃದ್ಧಿ ಇಲಾಖೆಯ ಮಂಗಳೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲೋಕೇಶ್ ಕುಮಾರ್, ಸಹಾಯಕ ಎಂಜಿನಿಯರ್ ಸಂತೋಷ್ ಕುಮಾರ್, ಕಾರ್ಯನಿರ್ವಾಹಕ ಎಂಜಿನಿಯರ್ ನರಸಿಂಹರಾಜು ಎಂಬವರು ಅಮಾನತುಗೊಂಡವರು. ಈ ಮೂವರು ಎಂಜಿನಿಯರ್ಗಳು ಗುತ್ತಿಗೆದಾರರಿಂದ ಕೋಟ್ಯಾಂತರ ರೂ. ಲಂಚ ಕೇಳಿದ್ದರು ಎಂದು ಆರೋಪಿಸಲಾಗಿದೆ.
ಕೆಲವು ದಿನಗಳ ಹಿಂದೆ ಲೋಕಾಯುಕ್ತ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಈ ಮೂವರು ಎಂಜಿನಿಯರ್ಗಳು ಸಿಕ್ಕಿಬಿದ್ದಿದ್ದರು.
ಮಂಗಳೂರು ನ್ಯಾಯಾಲಯವು ಆರೋಪಿಗಳಿಗೆ ಜಾಮೀನು ನೀಡಲು ನಿರಾಕರಿಸಿತ್ತು. ಬಳಿಕ ಆರೋಪಿಗಳು ಹೈಕೋರ್ಟ್ ಮೆಟ್ಟಲೇರಿ ಜಾಮೀನು ಪಡೆದಿದ್ದರು. ಇದೀಗ ಸರಕಾರ ಆರೋಪಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.