ಭಟ್ಕಳ:ಕಳೆದ ಎರಡು ದಿನಗಳಿಂದ ಪಟ್ಟಣದ ಮಾರಿಕಾಂಬಾ ದೇವಸ್ಥಾನದ ಗದ್ದುಗೆಯ ಏರಿದ ಸುಪ್ರಸಿದ್ದ ಮಾರಿ ದೇವಿ ಹಬ್ಬವೂ ಗುರುವಾರದಂದು ಸಂಜೆ ಹತ್ತು ಸಾವಿರಕ್ಕೂ ಅಧಿಕ ಭಕ್ತಸಮೂಹದೊಂದಿಗೆ ಭಕ್ತರು ದೇವಸ್ಥಾನದಿಂದ ಜಾಲಿಕೋಡಿ ಸಮುದ್ರ ತೀರದ ತನಕ ಮಾರಿ ಮೂರ್ತಿಯನ್ನು ಹೊತ್ತು ವಿಸರ್ಜಿಸುವ ಮೂಲಕ ಸುಸಂಪನ್ನಗೊಂಡಿತು.
ಕಳೆದ ಎರಡು ವರ್ಷ ಕೋವಿಡ್ 19 ವೈರಸ್ನ ಮಹಾಮಾರಿ ಹಿನ್ನೆಲೆಯಲ್ಲಿ ಮಾರಿಜಾತ್ರೆಯು ಸರಳವಾಗಿ ಜರುಗಿತ್ತು. ಈ ಬಾರಿ ಹಬ್ಬಕ್ಕೆ ಸಹಸ್ರ ಸಹಸ್ರ ಭಕ್ತರನ್ನೊಳಗೊಂಡಂತೆ ಅದ್ದೂರಿಯಾಗಿ ಸಂಭ್ರಮದಿಂದ ನಡೆಸಲಾಯಿತು.
ಬುಧವಾರದಂದು ಮಾರಿಕಾಂಬಾ ದೇವಸ್ಥಾನದ ಗದ್ದುಗೆಯಲ್ಲಿ ಪ್ರತಿಷ್ಠಾಪನೆಗೊಂಡ ಮಾರಿಯಮ್ಮನನ್ನು ಪೂಜಿಸಲಾಗಿತ್ತು. ಗುರುವಾರದಂದು ಮುಂಜಾನೆಯಿಂದಲೇ ಮಾರಿಯಮ್ಮನ ದರ್ಶನಕ್ಕೆ ತಾಲೂಕು ಸೇರಿದಂತೆ ಅಕ್ಕಪಕ್ಕದ ತಾಲೂಕು ಜಿಲ್ಲೆಯಿಂದ ಬಂದಂತಹ ಭಕ್ತರ ಸಾಲು ಕಿ.ಮೀ. ಗಟ್ಟಲೇ ನಿಂತು ಹಣ್ಣು ಕಾಯಿ ಮಾಡಿಸಿ ದೇವಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಎರಡನೇ ದಿನವಾದ ಗುರುವಾರದಂದು ಊರಿನ ಜನ ಹಬ್ಬವನ್ನು ಆಚರಿಸುವ ಸಂಪ್ರದಾಯ ಮೊದಲಿನಿಂದಲೂ ನಡೆದು ಬಂದಿದೆ.
ತಾಲೂಕಿನ ಗ್ರಾಮದ ಜನರು ಮಾರಿ ದೇವಿಗೆ ಮನೆಯಲ್ಲಿಯೇ ಪ್ರಾರ್ಥಿಸಿ ಕೋಳಿ ಬಲಿ ಮಾಡಿ ಹಬ್ಬವನ್ನು ಆಚರಿಸಿದ್ದಾರೆ.
ಮಧ್ಯಾಹ್ನ 4.30 ರ ಸುಮಾರಿಗೆ ಮಾರಿಯಮ್ಮನಿಗೆ ಆಡಳಿತ ಮಂಡಳಿ ಸದಸ್ಯರು,ಸ್ವಯಂ ಸೇವಕರು ಹಾಗೂ ಭಕ್ತರನ್ನೊಳಗೊಂಡಂತೆ ಮಹಾಮಂಗಳಾರತಿ ಪೂಜೆಯೊಂದಿಗೆ ವಿಸರ್ಜನಾ ಪೂಜೆ ನೆರವೆರಿಸಲಾಯಿತು.
ಧಾರಾಕಾರವಾಗಿ ಮಳೆ ಸುರಿಯುತ್ತಿದ್ದರು ಮಳೆಯನ್ನು ಲೆಕ್ಕಿಸದೆ ಮಾರಿ ದೇವಿಯ ಮೂರ್ತಿಯನ್ನು ಗದ್ದುಗೆಯಿಂದ ಎತ್ತಿಕೊಂಡು ದೇವಸ್ಥಾನದಿಂದ ಹೊರ ತಂದ ಭಕ್ತರು ತಲೆ ಮೇಲೆ ಹೊತ್ತು ಜಯಘೋಷ ಕೂಗುತ್ತ ಮೆರವಣಿಗೆಯಲ್ಲಿ
ಪೇಟೆ ಮುಖ್ಯ ರಸ್ತೆ ಮಾರ್ಗವಾಗಿ ಬಂದರ ರಸ್ತೆಯಿಂದ ಹನುಮಾನ ನಗರ ಕರಿಕಲ್ ಮಾರ್ಗದಲ್ಲಿ ಸಾಗಿ ಬಂದು ಜಾಲಿ ಕೋಡಿ ಸಮುದ್ರ ತೀರದಲ್ಲಿ ವಿಸರ್ಜನೆ ಮಾಡಲಾಯಿತು.
ಇನ್ನು ದಾರಿ ಮಧ್ಯೆ ಇಲ್ಲಿನ ಹನುಮಾನ ನಗರ ದಿಂದ ಸಮುದ್ರ ತೀರದ ತನಕ ಮನೆಯ ಮಂದಿ ಮಾರಿದೇವಿ ಮೆರವಣಿಗೆ ಸಾಗಿ ಬಂದಾಗ ಊರಿನ ಜನರು ರಸ್ತೆಯ ಪಕ್ಕದಲ್ಲಿ ಕೋಳಿ ಬಲಿ ನೀಡಿ ರೋಗ ರುಜನಿಗಲ ನಿರ್ಮೂಲನೆ ಮಾಡುವಂತೆ ಬೇಡಿಕೊಂಡು ದೇವಿಯ ಹೂವಿನ ಪ್ರಸಾದ ಸ್ವೀಕರಿಸಿದರು.
ಸಂಜೆ ವೇಳೆ 6:30 ರ ವೇಳೆಗೆ ಸಮುದ್ರ ತೀರ ತಲುಪಿದ ಮಾರಿ ದೇವಿ ಮೂರ್ತಿಯನ್ನು ಸ್ವಯಂ ಸೇವಕರು ಹಾಗೂ ಆಡಳಿತ ಮಂಡಳಿ ಸದಸ್ಯರ ಸಮ್ಮುಖದಲ್ಲಿ ಮಾರಿಯ ಮೂರ್ತಿಯನ್ನು ಮೆರವಣಿಗೆಯ ಮೂಲಕ ಜಾಲಿಕೋಡಿ ಸಮುದ್ರ ತೀರಕ್ಕೆ ಕೊಂಡೊಯ್ದು ಅಲ್ಲಿ ಮೂರ್ತಿಯ ಭಾಗಗಳನ್ನು ಬೇರ್ಪಡಿಸಿ ಸಮುದ್ರದಲ್ಲಿ ವಿಸರ್ಜಿಸಲಾಯಿತು.ಸಕಲ ವಿಧಿವಿಧಾನಗಳ ಮೂಲಕವಿಸರ್ಜಿಸುವದರೊಂದಿಗೆ ಮಾರಿ ಜಾತ್ರೆ ಸಂಪನ್ನಗೊಂಡಿತ್ತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಪರಮೇಶ್ವರ ನಾಯ್ಕ,ನರೇಂದ್ರ ನಾಯಕ,ಶ್ರೀಧರ ನಾಯ್ಕ, ಶ್ರೀಪಾದ ಕಂಚುಗಾರ,ರಾಮನಾಥ ಬಳಗಾರ,ದಿನೇಶ ನಾಯ್ಕ, ಕೃಷ್ಣ ನಾಯ್ಕ ಆಸರಕೇರಿ ಮುಂತಾದವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಜಿಲ್ಲಾ ವರಿಷ್ಠಾಧಿಕಾರಿ ವಿಷ್ಣುವರ್ಧನ್,
ಉಪ ವರಿಷ್ಠ ಅಧಿಕಾರಿ ಸಿಟಿ ಜಯಕುಮಾರ್,
ಡಿವೈಎಸ್ಪಿ ಶ್ರೀಕಾಂತ್, ನೇತೃತ್ವದಲ್ಲಿ ನಗರ ಠಾಣೆ ಸಿಪಿಐ ಗೋಪಿ ಕೃಷ್ಣ ಹಾಗೂ ಗ್ರಾಮೀಣ ಠಾಣೆ ಸಿಪಿಐ ಚಂದನ ಗೋಪಾಲ,ಮಂಕಿ ಠಾಣೆ ಸಿ.ಪಿ.ಐ ಮಹಾಬಲೇಶ್ವರ ನಾಯ್ಕ,ನಗರ ಠಾಣೆ ಪಿಎಸ್ಐ ಶಿವಾನಂದ, ಗ್ರಾಮೀಣ ಠಾಣೆ ಪಿ.ಎಸ್.ಐ ಗಳಾದ ಶ್ರೀಧರ್ ನಾಯ್ಕ,ಮಯೂರ ಪಟ್ಟಣಶೆಟ್ಟಿ,ಮಂಕಿ ಠಾಣೆ ಪಿ.ಎಸ್.ಐ ಭರತ,ಮತ್ತು
ಪಿಎಸ್ಐ ಕುಡಗುಂಟಿ, ಪಿ.ಎಸ್.ಐ ಸುಮಾ ಹಾಗೂ ಇತರ ಪೊಲೀಸರು,ಬಾಂಬ್ ನಿಷ್ಕ್ರಿಯ ದಳ,ಸೇರಿದಂತೆ
ಪೊಲೀಸ್ ಬಿಗಿ ಬಂದೋಬಸ್ತು ಏರ್ಪಡಿಸಿದರು.
ಮಾರಿ ವಿಸರ್ಜನೆ ಮಾಡುವ ಸಮುದ್ರ ತೀರದಲ್ಲಿ ಮುನ್ನೆಚ್ಚರಿಕವಾಗಿ ಎಸ್ಟಿಆರ್ಎಫ್ ತಂಡ, ಅಗ್ನಿಶಾಮಕದಳ,ಕರಾವಳಿ ಪೋಲಿಸ್ ಪಡೆ,ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ದಳ,ಯಾವುದೇ ಅನಾಹುತ ಆಗದಂತೆ ಮುನ್ನೆಚ್ಚರಿಕೆ ವಹಿಸಿದರು.