ಭಟ್ಕಳ: ಭಟ್ಕಳ ತಾಲೂಕಾ 10ನೇ ಸಾಹಿತ್ಯ ಸಮ್ಮೇಳನವು ಫೆಬ್ರವರಿ 17ರ ಶುಕ್ರವಾರದಂದು ಶ್ರೀ ಕ್ಷೇತ್ರ ಮುರ್ಡೇಶ್ವರದಲ್ಲಿ ನಡೆಯಲಿದೆ ಎಂದು ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ತಿಳಿಸಿದ್ದಾರೆ. ನಾಡಿನ ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಾಗೂ ಪ್ರವಾಸಿತಾಣವೂ ಆಗಿರುವ ಮುರುಡೇಶ್ವರದ ಡಾ. ಆರ್.ಎನ್, ಶೆಟ್ಟಿ ಸಭಾಭವನದಲ್ಲಿ ನಡೆಯಲಿರುವ ನುಡಿಸಮ್ಮೇಲನದಲ್ಲಿ ಎಲ್ಲ ಕನ್ನಡ ಮನಸುಗಳು ಪಾಲ್ಗೊಂಡು ಯಶಸ್ವಿಗೊಳಿಸಿವಂತೆ ಕೋರಿದ್ದಾರೆ.