ಭಟ್ಕಳ: ಸರಕಾರಿ ಪ್ರೌಢಶಾಲೆ ಬೆಳಕೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ, ಸಡಗರದಿಂದ ಆಚರಿಸಲಾಯಿತು.
ಮುಖ್ಯಾಧ್ಯಾಪಕರಾ ಶಾಲಿನಿ ನಾಯಕ ಮಾತನಾಡಿ ಕನ್ನಡ ನಾಡು ನುಡಿಗೆ ಕೊಡುಗೆ ನೀಡಿದ ಮಹನೀಯರನ್ನು ಸ್ಮರಿಸುವುದರ ಜೊತೆಗೆ ಕನ್ನಡವನ್ನು ಉಳಿಸಿ ಬೆಳಸುವುದು ನಮ್ಮೇಲ್ಲರ ಜವಾಬ್ಧಾರಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಪೊನ್ನಪ್ಪ ನಾಯ್ಕ, ಉಪಾಧ್ಯಕ್ಷರಾದ ಲೋಕೇಶ ನಾಯ್ಕ, ಸದಸ್ಯರಾದ ತೇಜಕುಮಾರ ಜೈನ ಶಿಕ್ಷಕವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಕಾಶ ಶಿರಾಲಿ ಸ್ವಾಗತಿಸಿದರು,ಸಿ ಎಸ್ ಬೈಲೂರು ವಂದನಾರ್ಪಣೆ ಮಾಡಿದರು, ಭಾರತಿ ಶಾನಭಾಗ ನಿರೂಪಿಸಿದರು. ವಿದ್ಯಾರ್ಥಿಗಳು ಕನ್ನಡ ನಾಡು ನಡಿಯ ಗೀತೆಗಳನ್ನು ಹಾಡಿದರು.