ಯಲ್ಲಾಪುರ : ರಾಷ್ಟ್ರೀಯ ಹೆದ್ದಾರಿ 63 ಅರೆಬೈಲ್ ಬಳಿ ಶನಿವಾರ ಹಿಟ್ ಅಂಡ್ ರನ್ ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ಕಲ್ಲೇಶ್ವರದ ಗುರುಪ್ರಸಾದ ಗಾಂವ್ಕರ (30) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಗುಳ್ಳಾಪುರದಿಂದ ಯಲ್ಲಾಫುರ ಕಡೆ ಬೈಕ್ ನಲ್ಲಿ ಗುರುಪ್ರಸಾದ ಬರುತ್ತಿದ್ದರು. ಎದುರಿನಿಂದ ಬಂದ ಅಪರಿಚಿತ ವಾಹನ ಢಿಕ್ಕಿ ಹೊಡೆದು ವಾಹನ ಚಾಲಕ ಪರಾರಿಯಾಗಿದ್ದಾನೆ.
ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪರಾರಿಯಾದ ವಾಹನಕ್ಕಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.