ಕುಮಟಾ : ಬಾರೀ ಮಳೆಯಿಂದ ಶಿರಸಿ - ಕುಮಟಾ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾಗಿದೆ.
ರಾಗಿಹೊಸಳ್ಳಿ ಸಮೀಪದಲ್ಲಿ ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ಸರ್ಕಾರಿ ಬಸ್ಸೊಂದು .
ಗುಡ್ಡ ಕುಸಿತದ ಮಣ್ಣಿನಲ್ಲಿ ಸಿಲುಕಿದೆ.
ಪರಿಣಾಮವಾಗಿ ಬಸ್ನಲ್ಲಿದ್ದ ಪ್ರಯಾಣಿಕರು ಪರದಾಟ ಅನುಭವಿಸಬೇಕಾಯಿತು. ಘಟನೆಯಿಂದ ಮಾರ್ಗದಲ್ಲಿ ಕೆಲ ಸಂಚಾರ ಸ್ಥಗಿತವಾಗಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗಳು ರಸ್ತೆಯಲ್ಲಿ ಬಿದ್ದ ಮರಗಳನ್ನ ತೆರವುಗೊಳಿಸಿದ್ದಾರೆ. ಬಳಿಕ ಪ್ರಯಾಣಿಕರಿಗೆ ಬೇರೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.