ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಸುರತ್ಕಲ್ ಯುವಕನ ಹತ್ಯೆ – ಆರೋಪಿಗಳ ಶೀಘ್ರ ಬಂಧನಕ್ಕೆ ಯು ಟಿ ಖಾದರ್ ಆಗ್ರಹ

ಸುರತ್ಕಲ್ ಯುವಕನ ಹತ್ಯೆ – ಆರೋಪಿಗಳ ಶೀಘ್ರ ಬಂಧನಕ್ಕೆ ಯು ಟಿ ಖಾದರ್ ಆಗ್ರಹ

Sat, 30 Jul 2022 01:45:51  Office Staff   Press Release

ಮಂಗಳೂರು: ಸುರತ್ಕಲ್ ಮಂಗಳಪೇಟೆ ನಿವಾಸಿ ಪಾಝಿಲ್ ಎಂಬ ಯುವಕನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದು ಮಾಜಿ ಸಚಿವ ಶಾಸಕ ಯು.ಟಿ.ಖಾದರ್ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.ಅರೋಪಿಗಳು ಯಾರೇ ಆಗಲಿ ಶೀಘ್ರ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಯು.ಟಿ.ಖಾದರ್ ಒತ್ತಾಯಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳು ಸಂಭವಿಸುತ್ತಿದ್ದು, ಕೋಮು ಸೌಹಾರ್ದತೆ ಹಾಳಾಗುವ ಸೂಚನೆ ದಟ್ಟವಾಗಿದೆ.ಆದುದರಿಂದ ಇದನ್ನು ಸರಕಾರ ಹಾಗೂ ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆಯನ್ನು ಉಳಿಸಲು ತಕ್ಷಣ ಕಾರ್ಯ ಪ್ರವೃತ್ತರಾಗಿ ಕ್ರಮ ಕೈಗೊಳ್ಳಬೇಕೆಂದು ಸರಕಾರಕ್ಕೆ ಯು.ಟಿ.ಖಾದರ್ ಒತ್ತಾಯಿಸಿದ್ದಾರೆ.


Share: