ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಹಿಂದೂ ರಾಷ್ಟ್ರ ಮಾಡುತ್ತೇವೆ ಎನ್ನುವವರು ಮೊದಲು ಹಿಂದೂರಾಷ್ಟ್ರದ ಪರಿಕಲ್ಪನೆ ಪ್ರಸ್ತುತಪಡಿಸಲಿ: ಡಾ.ಖಾಸೀಂ

ಹಿಂದೂ ರಾಷ್ಟ್ರ ಮಾಡುತ್ತೇವೆ ಎನ್ನುವವರು ಮೊದಲು ಹಿಂದೂರಾಷ್ಟ್ರದ ಪರಿಕಲ್ಪನೆ ಪ್ರಸ್ತುತಪಡಿಸಲಿ: ಡಾ.ಖಾಸೀಂ

Sat, 28 May 2022 15:24:29  Office Staff   S O News

ಭಟ್ಕಳ: ಭಾರತವನ್ನು ಹಿಂದೂ ರಾಷ್ಟ್ರ ಮಾಡುವುದಾಗಿ ಹೇಳಿಕೊಳ್ಳುತ್ತಿರುವವರು ಮೊದಲು ಹಿಂದೂ ರಾಷ್ಟ್ರದ ಪರಿಕಲ್ಪನೆಯನ್ನು ಜನರ ಮುಂದಿಡಲಿ. ಅದರಲ್ಲಿ ದಲಿತ, ಹಿಂದೂಳಿದ ವರ್ಗಗಳ,ಅಲ್ಪಸಂಖ್ಯಾತರ, ಆದಿವಾಸಿಗಳ, ಮಹಿಳೆಯರ ಸ್ಥಾನಮಾನಗಳೇನಾಗಿರುವುದು ಎಂಬುದನ್ನು ಸ್ಪಷ್ಟಪಡಿಸಲಿ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷ ಡಾ. ಖಾಸೀಂ ರಸೂಲ್ ಇಲಿಯಾಸ್ ಹೇಳಿದರು.

ಅವರು ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿ ದೇಶದ ಸಂವಿಧಾನಕ್ಕಿಂತ ಉತ್ತಮವಾದ ಸಂವಿಧಾನವನ್ನು ತರಲು ಸಾಧ್ಯವಾದರೆ ಅದನ್ನು ಜನರಿಗೆ ಸಪ್ತಪಡಿಸಿ. ಹಿಂದೂ ರಾಷ್ಟ್ರದಲ್ಲಿ ದಲಿತರ ಸ್ಥಾನವನ್ನು ಜನರಿಗೆ ತಿಳಿಸಿ, ಮಹಿಳೆಯರು, ಆದಿವಾಸಿಗಳು. ಸಮಾಜದ ತುಳಿತಕ್ಕೊಳಗಾದ ಜನರ ಮತ್ತು ಅಲ್ಪಸಂಖ್ಯಾತರ ಸ್ಥಾನವೇನು? ಎಂಬುದನ್ನು ಅವರು ಸ್ಪಷ್ಟಪಡಿಸಲಿ ಎಂದು ಸವಾಲು ಹಾಕಿದರು.

ಸಕಾರಾತ್ಮಕ ಅಜೆಂಡಾ ಇಲ್ಲದವರು ದೇಶವನ್ನು ವಿನಾಶದ ಹಾದಿಗೆ ತಳ್ಳುತ್ತಿದ್ದಾರೆ. ದೇಶ ಇಂದು ಸಾಗುತ್ತಿರುವ ಹಾದಿಯನ್ನು ತಡೆಯದಿದ್ದರೆ ಅಥವಾ ದಿಕ್ಕನ್ನು ಬದಲಿಸುವ ಪ್ರಯತ್ನ ಮಾಡದಿದ್ದರೆ ಸ್ವಾತಂತ್ರ್ಯಾನಂತರ ಈ ದೇಶ ದುರ್ಗತಿಯನ್ನು ಕಾಣಬಹುದು. ದೇಶದ ವಿರುದ್ಧ ನಡೆಯುತ್ತಿರುವ ದಬ್ಬಾಳಿಕೆಯನ್ನು ಮಟ್ಟಹಾಕಲು ಇಲ್ಲಿನ ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರು, ಹಿಂದುಳಿದವರು ಎದ್ದುನಿಲ್ಲಬೇಕು ಎಂದು ಅವರು ಕರೆ ನೀಡಿದರು.

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾಧ್ಯಕ್ಷ ಡಾ.ನಸೀಂ ಖಾನ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುಬ್ರಮಣ್ಯಂ ಆರ್ಮುಗಂ, ರಾಜ್ಯಾಧ್ಯಕ್ಷ ತಾಹಿರ್ ಹುಸೇನ್, ಉಪಾಧ್ಯಕ್ಷ ಶ್ರೀಕಾಂತ ಸಾಲಿಯಾನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಇಂಜಿನಿಯರ್ ಹಬೀಬುಲ್ಲಾ ಸಾರ್ವಜನಿಕರನ್ನುದ್ದೇಶಿ ಮಾತನಾಡಿದರು. ಖಮರುದ್ದೀನ್ ಮಶಾಯಿಖ್ ಕಾರ್ಯಕ್ರಮವನ್ನು ನಿರ್ವಹಿಸಿದರು. ಅಂತ್ಯದಲ್ಲಿ ಅಬ್ದುಲ್ ಮಜೀದ್ ಕೋಲ ಧನ್ಯವಾದಗೈದರು. 

ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿ ಸದಸ್ಯ ಮೌಲಾನಾ ಅಬ್ದುಲ್ ಅಲೀಮ್ ಕಾಸಿಮಿ, ಭಟ್ಕಳ ತಂಝೀಮ್‌ ಅಧ್ಯಕ್ಷ ಎಸ್‌.ಎಂ.ಸೈಯ್ಯದ್ ಪರ್ವೇಜ್ ಭಟ್ಕಳ ಮುಸ್ಲಿಮ್ ಯುತ್ ಫೆಡರೇಷನ್ ಅಧ್ಯಕ್ಷ ಅಝೀಝ್ ಉರ್ ರೆಹಮಾನ್ ರುಕ್ನುದ್ದಿನ್ ನದ್ವಿ, ಸಮಾಜ ಸೇವಕ ಸೈಯ್ಯದ್ ಹಸನ್ ಬರ್ಮಾವರ ಸೇರಿದಂತೆ ಹಲವು ಗಣ್ಯರು ವೇದಿಕೆಯಲ್ಲಿ ಉಪಸಥಿತರಿದ್ದರು.


Share: