ಹೊನ್ನಾವರ : ತಾಲೂಕಿನ ಕೆರೆಕೋಣ ಗ್ರಾಮದಲ್ಲಿ ಮನೆಯೊಂದರ ಬಾವಿಯಲ್ಲಿ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರ ಸಹಾಯದಿಂದ ಸುರಕ್ಷಿತವಾಗಿ ಮೇಲಕ್ಕೆತ್ತಿದ ಘಟನೆ ನಡೆದಿದೆ.
ಕೆರೆಕೋಣ ಸಮೀಪದ ಒಂದುವರೆ ವರ್ಷದ ಚಿರತೆಯೊಂದು ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿತ್ತು. ಬಾವಿಯಿಂದ ಮೇಲೆ ಬರಲು ಹರಸಾಹಸ ಪಡುತ್ತಿರುದನ್ನು ಗಮನಿಸಿದ ಸಾರ್ವಜನಿಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಅರಣ್ಯ ಅಧಿಕಾರಿಗಳು ಸಾರ್ವಜನಿಕರ ಸಹಕಾರದ ಮೇರೆಗೆ ಏಣಿ ಹಾಗೂ ಬಲೆಯ ಮುಂತಾದ ಸಲಕರಣೆಯನ್ನು ಬಳಸಿ ಸುರಕ್ಷಿತವಾಗಿ ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ.
ನಂತರ ಮೇಲಕ್ಕೆತ್ತಿದ ಚಿರತೆಯನ್ನ ಅರಣ್ಯಕ್ಕೆ ಬಿಡಲಾಗಿದೆ. ಆರ್.ಎಫ್.ಓ ವಿಕ್ರಂ ರೆಡ್ಡಿ ಸಲಹೆ ಮೇರೆಗೆ ಸಿಬ್ಬಂದಿಗಳು ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.